ಪ್ರಕೃತಿ ಚಿಕಿತ್ಸೆ
– ಡಾ|| ಡಿ. ವೀರೇಂದ್ರ ಹೆಗ್ಗಡೆಯವರು
ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ
– ಡಾ| ಎಲ್. ಎಚ್. ಮಂಜುನಾಥ್
ಬಸವರಾಜ ಬೊಮ್ಮಾಯಿಯವರಿಂದ ಫಲಾನುಭವಿಗಳಿಗೆ ಇ – ಶ್ರಮ್ ಕಾರ್ಡ್ ವಿತರಣೆ

ಕೇಂದ್ರ ಸರಕಾರವು ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಜಾರಿಗೊಳಿಸಿರುವ ಇ – ಶ್ರಮ್ ಕಾರ್ಡ್ ಅನ್ನು ಫಲಾನುಭವಿಗಳಿಗೆ ಗ್ರಾಮಾಭಿವೃದ್ಧಿ ಯೋಜನೆಯ ಸಿ.ಎಸ್.ಸಿ. ಕಾರ್ಯಕ್ರಮದ ಮೂಲಕ ಉಚಿತವಾಗಿ ವಿತರಿಸಲಾಗುತ್ತಿದೆ. ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಇ – ಶ್ರಮ್ ಕಾರ್ಡ್ ಅನ್ನು ಶಿಗ್ಗಾವಿಯಲ್ಲಿ ಫಲಾನುಭವಿಗಳಿಗೆ ವಿತರಿಸಿ ಶುಭಹಾರೈಸಿದರು.
ಮೂಡಬಿದ್ರೆ ಹಾಗೂ ಬ್ರಹ್ಮಾವರ ಕ್ಷೇತ್ರ ಸಂದರ್ಶನದಲ್ಲಿ ಪೂಜ್ಯ ಹೆಗ್ಗಡೆಯವರು
ಪೂಜ್ಯ ಖಾವಂದರು ಮೂಡುಬಿದಿರೆ ತಾಲೂಕಿನ ಫಲಾನುಭವಿಗಳ ಕೃಷಿ ತಾಕು ಭೇಟಿ
ಧರ್ಮಸ್ಥಳದ ಭಗವಾನ್ ಬಾಹುಬಲಿ ಸ್ವಾಮಿಗೆ ಪ್ರತಿಷ್ಠಾಪನಾ ಮಹೋತ್ಸವದ 40ನೇ ವರ್ಧಂತ್ಯುತ್ಸವದ ಅಂಗವಾಗಿ ಧಾರ್ಮಿಕ ವಿಧಿವಿಧಾನಗಳೊಂದಿಗೆ 216 ಕಲಶಗಳಿಂದ ಪಾದಾಭಿಷೇಕ
ಏ.27 : ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಹೆಗ್ಗಡೆಯವರ ನೇತೃತ್ವದಲ್ಲಿ ಏಪ್ರಿಲ್ 27ರಂದು ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ […]
ಬಸವರಾಜ್ ಬೊಮ್ಮಾಯಿ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಮಾನ್ಯ ಕಾರ್ಯನಿರ್ವಾಹಕ ನಿರ್ದೇಶಕರು
ಅರ್ಥ ಚಾರಿತ್ಯ ಮತ್ತು ಕ್ರೆಡಿಟ್ ರೇಟಿಂಗ್ ಮಾನದಂಡಗಳು
ಶ್ರೀಯುತ ಅನಿಲ್ ಕುಮಾರ್ ಎಸ್.ಎಸ್. ಕ್ರೆಡಿಟ್ ರೇಟಿಂಗ್ ಮಾನದಂಡಗಳು ಇಂದಿನ ಆರ್ಥಿಕ ವ್ಯವಹಾರದ ಜೀವನದಲ್ಲಿ ಅತ್ಯಂತ ಪ್ರಮುಖ ಪಾತ್ರವಹಿಸುತ್ತಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಸಾಲಗಾರರ ಕ್ಷಮತೆಯನ್ನು ನಿರ್ಧರಿಸಲು ಒಂದು ಮಾನದಂಡವನ್ನು ರೂಪಿಸಲು ಕ್ರಮ ಕೈಗೊಂಡಿದ್ದು, ಅದರ ಮುಂದಿನ ಫಲಶ್ರುತಿಯೇ 1988ನೇ ಅಸವಿಯಲ್ಲಿ ಕ್ರೆಡಿಟ್ ರೇಟಿಂಗ್ ವ್ಯವಸ್ಥೆಯನ್ನು ದೇಶದಲ್ಲಿ CRISILAನ ಮೂಲಕ ಪರಿಚಯಿಸಲಾಯಿತು. ಹಾಗೆಯೇ ಸಿಬಿಲ್ (CIBIL) 2000ನೇ ಇಸವಿಯಲ್ಲಿ ಸ್ಥಾಪನೆಗೊಂಡಿತು. ಪ್ರಸ್ತುತ ಸಿಬಿಲ್ ಮತ್ತು ಕ್ರಿಸಿಲ್ ಸಂಸ್ಥೆಗಳು ವ್ಯಕ್ತಿಗತ ಸಾಲ ಮರುಪಾವತಿ ದಕ್ಷತೆಯ ಮಾನದಂಡವನ್ನು ನೀಡುವ ಪ್ರಮುಖ […]
2022 ಫೆಬ್ರವರಿ
2022 ಜನವರಿ
2021 ಡಿಸೆಂಬರ್
ಆರೋಗ್ಯ ರಕ್ಷಾ ವಿಮಾ ಯೋಜನೆ
ತಮಗೆಲ್ಲರಿಗೂ ಅನುಕೂಲವಾಗುವಂತೆ ಅನಾರೋಗ್ಯ ವುಂಟಾದಾಗ ಆಸ್ಪತ್ರೆಯ ಚಿಕಿತ್ಸೆ ಪಡೆದುಕೊಳ್ಳಲು ಆರೋಗ್ಯ ರಕ್ಷಾ ಎಂಬ ವಿಮಾ ಯೋಜನೆಯನ್ನು ಕಳೆದ ವರ್ಷ ಜಾರಿಗೆ ತರಲಾಗಿತ್ತು. ಈ ವಿಮಾ ಯೋಜನೆಯಡಿ 33 ಲಕ್ಷ ಸದಸ್ಯರು ನೋಂದಾಯಿಸಿಕೊAಡಿದ್ದರು. ಈ ವಿಮಾ ಯೋಜನೆಯಲ್ಲಿ ರೂ. 10,000 ದವರೆಗೆ ವಿಮಾ ಸೌಲಭ್ಯವು ಲಭ್ಯವಿದ್ದು, ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಮಾಡಿಕೊಂಡವರಿಗೆ ಈ ಮೊತ್ತವು ಲಭಿಸುತ್ತಿತ್ತು. ಇದಕ್ಕೆ ವಿಧಿಸಲಾದ ಪ್ರೀಮಿಯಂ ರೂ. 245 ಆಗಿದ್ದು, ಸದಸ್ಯರಿಂದ ರೂ. 125 ನ್ನು ಮಾತ್ರ ಸಂಗ್ರಹಿಸಲಾಗಿತ್ತು. ಉಳಿದ ಮೊತ್ತವನ್ನು ಸಂಘ ಮತ್ತು […]
ಸಂಪೂರ್ಣ ಸುರಕ್ಷಾ ಯೋಜನೆ
ಪ್ರಿಯ ಸದಸ್ಯರೆ,ತಮಗೆಲ್ಲರಿಗೂ ಅನುಕೂಲವಾಗುವಂತೆ ಅನಾರೋಗ್ಯ ಉಂಟಾದಾಗ ಆಸ್ಪತ್ರೆಯ ಚಿಕಿತ್ಸೆ ಪಡೆದುಕೊಳ್ಳಲು ಸಂಪೂರ್ಣ ಸುರಕ್ಷಾ ಎಂಬ ವಿಮಾ ಯೋಜನೆಯು 2003 ರಿಂದ ಜಾರಿಯಲ್ಲಿದೆ. ಈ ವಿಮಾ ಯೋಜನೆಯಡಿ ಹೋದ ವರ್ಷ 9 ಲಕ್ಷ ಸದಸ್ಯರು ನೋಂದಾಯಿಸಿಕೊ0ಡಿದ್ದರು. ಈ ವಿಮಾ ಯೋಜನೆಯಲ್ಲಿ ಪ್ರತಿಯೋರ್ವ ಸದಸ್ಯನಿಗೆ ರೂ. 20,000 ದಂತೆ ಕುಟುಂಬದ 6 ಸದಸ್ಯರಿಗೆ ಒಟ್ಟಾಗಿ ರೂ. 1,20,000 ದವರೆಗೆ ವಿಮಾ ಸೌಲಭ್ಯವು ಲಭ್ಯವಿದ್ದು, ಆಸ್ಪತ್ರೆಯ ಒಳರೋಗಿಯಾಗಿ ಚಿಕಿತ್ಸೆ ಮಾಡಿಕೊಂಡವರಿಗೆ ಈ ಮೊತ್ತವು ದೊರೆಯುತ್ತದೆ. ಇದಕ್ಕೆ ವಿಧಿಸಲಾದ ಪ್ರೀಮಿಯಂ ಮೊತ್ತ ರೂ. […]
ಬದುಕಿಗೆ ಭದ್ರತೆ ನೀಡುವ ‘ಮೈಕ್ರೋ ಬಚತ್’
ಅತೀ ಕಡಿಮೆ ಪ್ರೀಮಿಯಂನೊ0ದಿಗೆ ಹೆಚ್ಚು ವಿಮಾ ರಕ್ಷಣೆಯ ಜೊತೆಗೆ ಖಚಿತ ವಿಮಾ ಮೊತ್ತವನ್ನು ಒದಗಿಸುವ ಭಾರತೀಯ ಜೀವ ವಿಮಾ ನಿಗಮದ ‘ಮೈಕ್ರೋ ಬಚತ್’ ಎಂಬ ಪಾಲಿಸಿಯ ಸೌಲಭ್ಯವನ್ನು ಗ್ರಾಮಾಭಿವೃದ್ಧಿ ಯೋಜನೆಯ ಸಂಘಗಳ ಸದಸ್ಯರುಗಳ ಬೇಡಿಕೆಯ ಮೇರೆಗೆ ಅವರಿಗೆ ಒದಗಿಸುವ ಕೆಲಸವನ್ನು ಕಳೆದ ಮೂರು ವರ್ಷಗಳಿಂದ ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ.ಮೈಕ್ರೋ ಬಚತ್ ಪಾಲಿಸಿಯ ವಿಶೇಷತೆಕನಿಷ್ಠ ೧೮ ವರ್ಷಗಳಿಂದ ಗರಿಷ್ಠ 55 ವಯಸ್ಸಿನವರೆಗೆ ಯಾರು ಬೇಕಾದರೂ ಮೈಕ್ರೋ ಬಚತ್ ಪಾಲಿಸಿಯನ್ನು ಪಡೆಯಬಹುದಾಗಿದೆ. ಪಾಲಿಸಿಯ ಅವಧಿ ಹತ್ತರಿಂದ ಹದಿನೈದು ವರ್ಷಗಳಾಗಿರುತ್ತದೆ. ಪಾಲಿಸಿಯ […]
ಮಕ್ಕಳ ಜ್ವರ – ಮೈಮರೆಯದಿರಿ
ಮಕ್ಕಳಿಗೆ ಜ್ವರ ಇದೆ ಎಂದು ತಿಳಿಯುವುದು ಹೇಗೆ? ಮುಟ್ಟಿ ನೋಡಿದರೆ ಜ್ವರದ ಬಗ್ಗೆ ಒಂದು ಅಂದಾಜು ಮಾಡಬಹುದಷ್ಟೇ. ಆದರೆ ಅದು ಸಾಕಷ್ಟು ಬಾರಿ ತಪ್ಪಾಗಬಹುದು. ಅದಕ್ಕೇ ಜ್ವರದ ಮಾಪಕವಾದ ಡಿಜಿಟಲ್ ಥರ್ಮೋಮೀಟರ್ ಉಪಯೋಗಿಸುವುದು ಉತ್ತಮ. ಅದರಿಂದ ಜ್ವರದ ತೀವ್ರತೆ ಎಷ್ಟಿದೆ ಎಂದು ತಿಳಿಯುತ್ತದೆ. ಕಂಕುಳಲ್ಲಿ ಇಟ್ಟು ಪರೀಕ್ಷಿಸಿದಾಗ 99.4 ಡಿಗ್ರಿ ಪ್ಯಾರಾಮಿಟ್ಗಿಂತ ಹೆಚ್ಚು ದೇಹದ ಉಷ್ಣತೆ ಇದ್ದರೆ ಜ್ವರ ಎಂದು ಭಾವಿಸಬೇಕಾಗುತ್ತದೆ. ಸೆಲ್ಸಿಯಸ್ನಲ್ಲಾದರೆ 36.5 ಡಿಗ್ರಿ ಸೆಲ್ಸಿಯಸ್ನಿಂದ 37.5 ಡಿಗ್ರಿ ಸೆಲ್ಸಿಯಸ್ವರೆಗೆ ದೇಹದ ಉಷ್ಣತೆ ಇರುತ್ತದೆ. ಹೆಚ್ಚಿದ್ದರೆ […]
ಬದುಕು ಸಿಹಿಯಾಗಿಸಿದ ಸಿಹಿತಿಂಡಿ ತಯಾರಿ

ರಾಣೇಬೆನ್ನೂರು ತಾಲೂಕಿನ ಸಾಯಿ ನಗರದ ರೂಪಾ ಹೆಚ್. ಶ್ರೀಹರಿಯವರದ್ದು ಇಬ್ಬರು ಮಕ್ಕಳೊಂದಿಗಿನ ಪುಟ್ಟ ಕುಟುಂಬ. ಪತಿ ಸರಕಾರಿ ಉದ್ಯೋಗಿ. ತನ್ನ ಗಂಡನಿಗೆ ತಾನು ಕೈಲಾದ ಸಹಾಯ ಮಾಡಬೇಕೆಂಬ ನಿಟ್ಟಿನಲ್ಲಿ ರೂಪಾರವರು ಹನ್ನೊಂದು ವರ್ಷಗಳ ಹಿಂದೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಪ್ರಾರ್ಥನಾ’ ಸ್ವಸಹಾಯ ಸಂಘದ ಸದಸ್ಯರಾದರು.ಯೋಜನೆಗೆ ಸೇರಿದ ನಂತರ ಯೋಜನೆಯಿಂದ ಮಾಹಿತಿ ಪಡೆದು ಐದು ವರ್ಷಗಳ ಕಾಲ ಟೈಲರಿಂಗ್ ವೃತ್ತಿಯನ್ನು ನಡೆಸಿದರು. ನಂತರ ಎದುರಾದ ಅನಾರೋಗ್ಯ ಸಮಸ್ಯೆಯಿಂದ ತನ್ನ ಟೈಲರಿಂಗ್ ವೃತ್ತಿಯನ್ನು ಬಿಟ್ಟು ಬಿಡುತ್ತಾರೆ. ಮತ್ತೆ ಯೋಜನೆಯ […]
ವಿಶೇಷಚೇತನರ ಪಾಲಿನ ಭಾಗ್ಯದ ಬಾಗಿಲು ಸೇವಾ ಅಂಧರ ಸಂಸ್ಥೆ

ಪ್ರತಿ ವರ್ಷ ರಾಜ್ಯಾದಾದ್ಯಂತ ಸುತ್ತಾಡಿ ಬೇರೆ ಬೇರೆ ಕಡೆಗಳಲ್ಲಿರುವ ಕಿವುಡ, ಮೂಕ, ಅಂಧ ಮಕ್ಕಳನ್ನು ಗುರುತಿಸಿ ಅವರನ್ನು ಕರೆತಂದು ಅವರಿಗೆ ವಸತಿ ವ್ಯವಸ್ಥೆಯೊಂದಿಗೆ ವಿದ್ಯಾಭ್ಯಾಸವನ್ನು ಕಲ್ಪಿಸಿ, ಉದ್ಯೋಗವಕಾಶವನ್ನು ಒದಗಿಸಿಕೊಡುವ ಸಂಸ್ಥೆಯೊಂದು ರಾಣೇಬೆನ್ನೂರು ತಾಲೂಕಿನ ಮಾರುತಿ ನಗರದಲ್ಲಿದೆ.ಸೇವೆಯ ಆರಂಭದ ಕಥೆ‘ಸೇವಾ ಅಂಧರ ಸಂಸ್ಥೆ’ಯ ಸ್ಥಾಪಕರಾದ ಎಚ್.ಆರ್. ಶಿವಕುಮಾರ್ ಹುಟ್ಟಿದ್ದು ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ. ಸಿದ್ಧಗಂಗಾ ಮಠದಲ್ಲಿ ಆಶ್ರಯ ಪಡೆದ ಅವರು ಬಾಲ್ಯದಲ್ಲೇ ಮುಂದೆ ತಾನು ಕೂಡಾ ಸಮಾಜಕ್ಕೆ ಉಪಯೋಗವಾಗುವ ನಿಟ್ಟಿನಲ್ಲಿ ಏನಾದರೊಂದು ಕೆಲಸ ಮಾಡಬೇಕೆಂದು ನಿರ್ಧರಿಸಿದರು. ಶಾಲಾ ದಿನಗಳಲ್ಲೆ […]
ವೈನ್ಶಾಪ್ ಗಿರಾಕಿ ಶೇಂಗಾ ಮಾರಾಟಗಾರನಾದ ಕತೆ!

‘ನನ್ನ ಮನೆಯಿಂದ ಸ್ವಲ್ಪ ದೂರದಲ್ಲೆ ವೈನ್ಶಾಪ್ ಇದೆ. ನನಗಾಗಿಯೇ ಇಲ್ಲಿ ವೈನ್ಶಾಪ್ ತೆರೆದಿದ್ದಾರೇನೋ ಎನ್ನುವಷ್ಟು ಖುಷಿಯಿಂದ ಪ್ರತಿ ದಿನ ವೈನ್ಶಾಪ್ನ ಬಾಗಿಲು ತೆರೆಯುವ ಹೊತ್ತಿಗೆ ಅಲ್ಲಿಗೆ ಹಾಜರಾಗುತ್ತಿದ್ದೆ. ಮದ್ಯ ಸೇವಿಸಲು ಕುಳಿತಾಗ ದಿನನಿತ್ಯ ಇನ್ನೂರರಿಂದ ಐನೂರು ರೂಪಾಯಿಷ್ಟು ಕುಡಿದೇ ಅಭ್ಯಾಸ! ಮದ್ಯ ಸೇವಿಸುವಾಗ ತಿನ್ನಲು ಹುರಿದ ಶೇಂಗಾ ಬೀಜವೂ ಜೊತೆಗೆ ಬೇಕೇ ಬೇಕು. ಬೀಜಗಳನ್ನು ತಿನ್ನುತ್ತಾ ನನ್ನನ್ನು ನಾನು ಮರೆತು ಬಿಡುತ್ತಿದ್ದೆ. ಅಮಲೇರಿದ ನಂತರ ಯಾವ ಹೊತ್ತಿಗಾದರೂ ಸರಿ ಮನೆ ಸೇರುತ್ತಿದ್ದೆ. ಕೆಲವೊಮ್ಮೆ ಹಾಡಹಗಲೇ ರಸ್ತೆಯ ಬದಿಯಲ್ಲಿ […]
ಆರೋಗ್ಯವೇ ಭಾಗ್ಯ
ಡಾ| ಎಲ್. ಎಚ್. ಮಂಜುನಾಥ್, ಕಾರ್ಯನಿರ್ವಾಹಕ ನಿರ್ದೇಶಕರು ಇತ್ತೀಚಿನ ದಿನಗಳಲ್ಲಿ ಆಸ್ಪತ್ರೆಯ ವೆಚ್ಚಗಳು ಬಹಳಷ್ಟು ಹೆಚ್ಚಾಗುತ್ತಿವೆ. ಅನಾರೋಗ್ಯ ಪೀಡಿತರಾಗಿ ಅಥವಾ ಅಪಘಾತಕ್ಕೊಳಗಾಗಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಾದರೆ ಗುಣಮುಖರಾದರೂ ಆಸ್ಪತ್ರೆಯ ಬಿಲ್ಲುಗಳು ನಮ್ಮನ್ನು ಮತ್ತೊಮ್ಮೆ ಬಡವರನ್ನಾಗಿಸುತ್ತದೆ. ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ತಂತ್ರಜ್ಞಾನಗಳು ಹೆಚ್ಚಾಗಿರುವುದರಿಂದ ಗಂಭೀರ ಕಾಯಿಲೆಗಳಿಗೂ ಚಿಕಿತ್ಸೆ ದೊರೆಯುತ್ತದೆ. ಆದರೆ ಈ ಚಿಕಿತ್ಸೆ ವೆಚ್ಚಗಳನ್ನು ಭರಿಸಲು ಸಾಮಾನ್ಯರಿಗೆ ಸಾಧ್ಯವಿಲ್ಲ. ಇತ್ತೀಚೆಗಷ್ಟೇ ಒಬ್ಬ ರೋಗಿಯ ಆಸ್ಪತ್ರೆಯ ಚಿಕಿತ್ಸಾ ಎಸ್ಟಿಮೇಟ್ ರೂ. 55 ಲಕ್ಷ ಮೊತ್ತ ಆದ ಬಗ್ಗೆ ವರದಿಯನ್ನು […]